ಮಾರ್ಚ್‌ನಲ್ಲಿ ಆರಂಭವಾಗಲಿದೆ ನಟ ಚರಣ್‌ರಾಜ್ ನಿರ್ದೇಶನದ ಹೊಸ ಚಿತ್ರ ʼಕರುನಾಡ ಕಣ್ಮಣಿʼ

ಬಹುಭಾಷಾ ನಟ ಕಿಶೋರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದು, ಚರಣ್ ರಾಜ್ ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.  ಸಾಗರ್ ಗುರುರಾಜ್ ಸಂಗೀತ ನಿರ್ದೇಶನ ಹಾಗೂ ಪೃಥ್ವಿ ಛಾಯಾಗ್ರಹಣವಿರುವ ಈ ನೂತನ ಚಿತ್ರದ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.                      

Written by - Bhavishya Shetty | Last Updated : Feb 11, 2025, 04:39 PM IST
    • ತಮ್ಮ ಅಮೋಘ ಅಭಿನಯದ ಮೂಲಕ ಚಾಪು ಮೂಡಿಸಿರುವ ನಟ ಚರಣ್ ರಾಜ್
    • ಚರಣ್ ರಾಜ್ ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ
    • ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ
ಮಾರ್ಚ್‌ನಲ್ಲಿ ಆರಂಭವಾಗಲಿದೆ ನಟ ಚರಣ್‌ರಾಜ್ ನಿರ್ದೇಶನದ ಹೊಸ ಚಿತ್ರ ʼಕರುನಾಡ ಕಣ್ಮಣಿʼ  title=
File Photo

ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಚಾಪು ಮೂಡಿಸಿರುವ ಜನಪ್ರಿಯ ನಟ ಚರಣ್ ರಾಜ್ ಅವರು ನಿರ್ದೇಶಿಸಲಿರುವ ನೂತನ ಚಿತ್ರವೊಂದು ಮಾರ್ಚ್ ಅಂತ್ಯದಲ್ಲಿ ಆರಂಭವಾಗಲಿದೆ. ಕನ್ನಡ, ತಮಿಳು, ತೆಲುಗು ಮೂರು ಭಾಷೆಗಳಲ್ಲಿ ಈ ಚಿತ್ರ ಮೂಡಿಬರಲಿದ್ದು, ABCR ಫಿಲಂ ಫ್ಯಾಕ್ಟರಿ ಬ್ಯಾನರ್ ನಲ್ಲಿ ಅಶ್ವಥ್ ಬಳಗೆರೆ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.  

ಇದನ್ನೂ ಓದಿ:  ಸರ್ಕಾರಿ ನೌಕರರಿಗೆ ಜಾಕ್ ಪಾಟ್ ! ಮೂಲ ವೇತನದಲ್ಲಿಯೇ 20-30% ಹೆಚ್ಚಳ !

ಬಹುಭಾಷಾ ನಟ ಕಿಶೋರ್ ಸಹ ಈ ಚಿತ್ರದಲ್ಲಿ ನಟಿಸಲಿದ್ದು, ಚರಣ್ ರಾಜ್ ಅವರ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.  ಸಾಗರ್ ಗುರುರಾಜ್ ಸಂಗೀತ ನಿರ್ದೇಶನ ಹಾಗೂ ಪೃಥ್ವಿ ಛಾಯಾಗ್ರಹಣವಿರುವ ಈ ನೂತನ ಚಿತ್ರದ ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.         

ಇದನ್ನೂ ಓದಿ:  ಎಂಗೇಜ್ ಆದ್ರಾ ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ? ಕೈಯಲ್ಲಿನ ಉಂಗುರ ನೋಡಿ ರಕ್ಷಿತಾ ಶಾಕ್‌! ಆ ಲಕ್ಕಿ ಮ್ಯಾನ್ ಯಾರು?         

ಇದೊಂದು ಮರ್ಡರ್ ಮಿಸ್ಟರಿ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ನಾನೇ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದೇನೆ. ಈ ಚಿತ್ರದ  ಬಹುತೇಕ ಚಿತ್ರೀಕರಣ ಕಾಲೇಜ್ ನಲ್ಲೇ ನಡೆಯಲಿದ್ದು, ಕಾಲೇಜ್ ರಜಾ ಶುರುವಾದ ತಕ್ಷಣ ನಮ್ಮ ಚಿತ್ರದ ಚಿತ್ರೀಕರಣ ಸಹ ಆರಂಭವಾಗಲಿದೆ. ಕನ್ನಡದ ಚಿತ್ರೀಕರಣ ಬೆಂಗಳೂರಿನಲ್ಲಿ, ತಮಿಳಿನ ಚಿತ್ರೀಕರಣ ಪಾಂಡಿಚೇರಿ ಹಾಗೂ ಕಡಲೂರಿನಲ್ಲಿ ಮತ್ತು ತೆಲುಗು ಭಾಷೆಯ ಚಿತ್ರೀಕರಣ ಹೊಂಗನೂರು ಮುಂತಾದ ಕಡೆ ನಡೆಯಲಿದೆ. ಈ ಚಿತ್ರದ ಮೂಲಕ ನನ್ನ ದ್ವಿತೀಯ ಪುತ್ರ ದೇವ್ ಚರಣ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ನನಗೆ ತಾವೆಲ್ಲರೂ ಆರಂಭದಿಂದಲೂ ಅಧಿಕ ಪ್ರೀತಿ ಹಾಗೂ ಪ್ರೋತ್ಸಾಹ ನೀಡಿದ್ದೀರಿ. ಅದು ನನ್ನ ಮಗನಿಗೂ ಮುಂದುವರೆಯಲಿ ಎನ್ನುತ್ತಾರೆ ಹಿರಿಯ ನಟ ಹಾಗೂ ನಿರ್ದೇಶಕ ಚರಣ್ ರಾಜ್.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News