ಇಷ್ಟವಾದ ಡಾಬಾ ಮುಂದೆ ಮತ್ತೆ ಉಸಿರಾಡಿದ ಮೃತ ವ್ಯಕ್ತಿ : ಮೃತಪಟ್ಟ ವ್ಯಕ್ತಿ ಪವಾಡದಂತೆ ಬದುಕಿ ಬಂದ ಕತೆ

ಕುಟುಂಬದವರು ಬಿಷ್ಟಪ್ಪ ಅವರನ್ನು ಕಳೆದುಕೊಂಡ ದುಃಖದಲ್ಲಿಯೇ  ಊರಿಗೆ ವಾಪಸಾಗುತ್ತಿದ್ದರು. ಈ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದುಕೊಂಡಿದ್ದ ಬಿಷ್ಟಪ್ಪ ಮತ್ತೆ ಉಸಿರಾಡಲು ಆರಂಭಿಸಿದ್ದಾರೆ.  

Written by - Ranjitha R K | Last Updated : Feb 10, 2025, 03:31 PM IST
  • ಮೃತಪಟ್ಟ ವ್ಯಕ್ತಿಯೊಬ್ಬ ಪವಾಡದಂತೆ ಬದುಕುಳಿದ ಘಟನೆ
  • ಮೃತದೇಹ ತರುತ್ತಿರುವಾಗ ಮತ್ತೆ ವ್ಯಕ್ತಿ ಉಸಿರಾಟ ಆರಂಭ
  • ಕಾಮಾಲೆ ರೋಗದಿಂದ ಬಳಲುತ್ತಿದ್ದ ಬಿಷ್ಟಪ್ಪ ಗುಡಿಮನಿ
ಇಷ್ಟವಾದ ಡಾಬಾ ಮುಂದೆ ಮತ್ತೆ ಉಸಿರಾಡಿದ ಮೃತ ವ್ಯಕ್ತಿ : ಮೃತಪಟ್ಟ ವ್ಯಕ್ತಿ ಪವಾಡದಂತೆ ಬದುಕಿ ಬಂದ ಕತೆ  title=

ಹಾವೇರಿ : ಮೃತಪಟ್ಟ ವ್ಯಕ್ತಿಯೊಬ್ಬ ಪವಾಡದಂತೆ ಬದುಕುಳಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿ ನಡೆದಿದೆ. ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಊರಿಗೆ ಮೃತದೇಹ ತರುತ್ತಿರುವಾಗ ಮತ್ತೆ ವ್ಯಕ್ತಿ ಉಸಿರಾಡುವುದಕ್ಕೆ ಆರಂಭಿಸಿದ್ದಾನೆ. 

45 ವರ್ಷದ ಬಿಷ್ಟಪ್ಪ ಗುಡಿಮನಿ ಸಾವನ್ನಪ್ಪಿ ಬಳಿಕ ಬದುಕುಳಿದಿರುವ ವ್ಯಕ್ತಿ. ಕಾಮಾಲೆ ರೋಗದಿಂದ ಬಳಲುತ್ತಿದ್ದ ಬಿಷ್ಟಪ್ಪ ಗುಡಿಮನಿ ಅವರನ್ನು ಮೂರ್ನಾಲ್ಕು ದಿನ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಬಿಷ್ಟಪ್ಪ ಗುಡಿಮನಿ ಮೃತಪಟ್ಟಿದ್ದಾರೆ ಎಂದುಕೊಂಡು  ಮನೆಯವರು ದೇಹವನ್ನು ಮನೆಗೆ ಕರೆ ತಂದಿದ್ದಾರೆ. 

ಇದನ್ನೂ ಓದಿ : ದೆಹಲಿ ಚುನಾವಣೆಯಿಂದಾರೂ ಕಾಂಗ್ರೆಸ್ ಪಾಠ ಕಲಿಯಲಿ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ 

ಕುಟುಂಬದವರು ಬಿಷ್ಟಪ್ಪ ಅವರನ್ನು ಕಳೆದುಕೊಂಡ ದುಃಖದಲ್ಲಿಯೇ  ಊರಿಗೆ ವಾಪಸಾಗುತ್ತಿದ್ದರು. ಈ ವೇಳೆ ಬಿಷ್ಟಪ್ಪ ಅವರು ನಿತ್ಯ ಊಟ ಮಾಡುತ್ತಿದ್ದ ಅವರಿಗೆ ಬಹಳ ಇಷ್ಟವಾದ ಡಾಬಾ ಮುಂದೆ ಬರುತ್ತಿದ್ದಂತೆ ಅವರ ಮಗ ಡಾಬಾ ಬಂತು ನೋಡು, ಊಟ ಮಾಡ್ತಿಯಾ ಎಂದು ಗೋಳಾಡಿ ಕಣ್ಣೀರಿಟ್ಟಿದ್ದಾರೆ. ಈ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎಂದುಕೊಂಡಿದ್ದ ಬಿಷ್ಟಪ್ಪ ಮತ್ತೆ ಉಸಿರಾಡಲು ಆರಂಭಿಸಿದ್ದಾರೆ. ಕೂಡಲೇ ಆಂಬ್ಯುಲೆನ್ಸ್​​ ನಿಲ್ಲಿಸಿ ಬಿಷ್ಟಪ್ಪನಿಗೆ ಶಿಗ್ಗಾಂವಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಈಗ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಿಷ್ಟಪ್ಪ ನಿಧನ ಸುದ್ದಿ ಬ್ಯಾನರ್, ವಾಟ್ಸಪ್ ಗ್ರೂಪನಲ್ಲಿ ಓಂ ಶಾಂತಿ ಎಂದು ಸಂಬಂಧಿಕರು ಹಾಕಿದ್ದರು. ಇದೀಗ ಆತನಿಗೆ ಮರುಜೀವ ಬಂದಿದ್ದು ದೇವರ ಪವಾಡ ಎಂದು ಸ್ಥಳೀಯರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ : 15ನೇ ಏರ್‌ ಶೋ ಹಿನ್ನೆಲೆ ಸಂಚಾರ ದಟ್ಟಣೆ : ಏರ್ಪೊರ್ಟ್ ಕಡೆಗೆ ಹೋಗುವ ಪ್ರಯಾಣಿಕರಿಗೆ ಪರ್ಯಾಯ ಮಾರ್ಗ ಸೂಚಿ

ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಕಿಮ್ಸ್ ನಿರ್ದೇಶಕ ಎಸ್ ಎಫ್ ಕಮ್ಮಾರ್, ಬಿಷ್ಣಪ್ಪ ಮತ್ತು ಕುಟುಂಬಸ್ಥರು ನಿನ್ನೆ ಸಂಜೆ 4.20 ಕಿಮ್ಸ್ ಆಸ್ಪತ್ರೆಗೆ ಬಂದಿದ್ದಾರೆ. ನಮ್ಮ ಆಸ್ಪತ್ರೆಗೆ ಬಂದಾಗ ಬಿಷ್ಣಪ್ಪ ಜೀವಂತವಾಗಿದ್ದ. ಆದರೆ, ಆರೋಗ್ಯ ಸ್ಥಿತಿ ಬಹಳಷ್ಟು ಚಿಂತಾಜನಕವಾಗಿತ್ತು. ಹೀಗಾಗಿ ನಮ್ಮ ಆಸ್ಪತ್ರೆಯ ಮುಖ್ಯ ವೈದ್ಯ ಸುರೇಶ್ ನೇತೃತ್ವ ತಂಡ ಕೂಡಲೇ ಚಿಕಿತ್ಸೆ ನೀಡಿದ್ದಾರೆ. ಸದ್ಯ ಬಿಷ್ಣಪ್ಪ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ ಅವರಿಗೆ ಚಿಕಿತ್ಸೆ ನೀಡುತ್ತೆದ್ದೆವೆ ಎಂದು ಹೇಳಿದ್ದಾರೆ. 

ಅಲ್ಲದೆ ನಾವು ಎಸ್ ಡಿಎಂಸಿ ಹೆಲ್ತ್ ರಿಪೋರ್ಟ್ ಪರಿಶೀಲನೆ ನಡೆಸಿದ್ದೆವೆ. ಅವರು ಡಿಸ್ಜಾರ್ಜ್ ಎಗೈನ್ಸ್ಟ್ ಮೆಡಿಕಲ್ ಅಡ್ವೇಜ್ ನಿಯಮ ಮೀರಿರುವುದು ಕಂಡಬಂದಿದೆ. ಅಂದರೆ ತಜ್ಞ ವೈದ್ಯರ ಸಲಹೆಯನ್ನು ಧಿಕ್ಕರಿಸಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಅದೇನೆ ಇದ್ದರೂ ಬಿಷ್ಣಪ್ಪ ಬದುಕಿರುವವರಿಗೂ ನಮ್ಮ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

Trending News