ಬೆಂಗಳೂರು: ಕೊರೊನಾ ಸಾಂಕ್ರಾಮಿಕದ ವೇಳೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಬುಧವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈ 40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು?’ ಎಂದು ಪ್ರಶ್ನಿಸಿದೆ.
‘"40" ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ!, ಕಮಿಷನ್ - 40%, ಕೋವಿಡ್ ಹಗರಣ - 40 ಸಾವಿರ ಕೋಟಿ ರೂ. ಸ್ವತಃ ಬಿಜೆಪಿಯ ಹಿರಿಯ ನಾಯಕರಿಂದಲೇ ಹೊರಬಿದ್ದ 40 ಸಾವಿರ ಕೋಟಿ ರೂಪಾಯಿಯ ಕೋವಿಡ್ ಹಗರಣದ ಬಗ್ಗೆ ಬಿ.ವೈ.ವಿಜಯೇಂದ್ರ ಜನತೆಗೆ ಉತ್ತರಿಸದೆ ಮೌನವಾಗಿರುವುದೇಕೆ? ಈ 40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು?’ ಅಂತಾ ಟೀಕಿಸಿದೆ.
"40" ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ!
👉ಕಮಿಷನ್ - 40%
👉ಕೋವಿಡ್ ಹಗರಣ - 40 ಸಾವಿರ ಕೋಟಿಸ್ವತಃ ಬಿಜೆಪಿಯ ಹಿರಿಯ ನಾಯಕರಿಂದಲೇ ಹೊರಬಿದ್ದ 40 ಸಾವಿರ ಕೋಟಿ ರೂಪಾಯಿಯ ಕೋವಿಡ್ ಹಗರಣದ ಬಗ್ಗೆ @BYVijayendra ಜನತೆಗೆ ಉತ್ತರಿಸದೆ ಮೌನವಾಗಿರುವುದೇಕೆ?
ಈ 40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು@BJP4Karnataka ?
— Karnataka Congress (@INCKarnataka) December 27, 2023
ಇದನ್ನೂ ಓದಿ: ರಾಜ್ಯದಲ್ಲಿ JN.1 ವೈರಸ್ನ ಆತಂಕ : ಸೋಂಕು ತಡೆಗೆ T3 ಸೂತ್ರ ಪಾಲಿಸೋದಕ್ಕೆ ಮುಂದಾದ ಆರೋಗ್ಯ ಇಲಾಖೆ
ಕರ್ನಾಟಕದ ಜನರನ್ನು ಕಾಡಿದ ಅತಿ ದೊಡ್ಡ ವೈರಸ್ ಭ್ರಷ್ಟ ಬಿಜೆಪಿಯೇ ಹೊರತು ಕರೋನವಲ್ಲ!
ಸಾವಿನ ಮನೆಯಲ್ಲಿ ಭ್ರಷ್ಟಾಚಾರದ ಸಂಭ್ರಮಾಚರಣೆ ಮಾಡಿದ ಬಿಜೆಪಿ ಸರ್ಕಾರದ ಹಗರಣಗಳು ಬಿಜೆಪಿಗರಿಂದಲೇ ಬಯಲಾಗುತ್ತಿದೆ.@BYVijayendra ಅವರೇ, ಅಂದು ಶ್ಯಾಡೋ ಸಿಎಂ ಆಗಿ ಇಡೀ ಆಡಳಿತವನ್ನು ನಿಯಂತ್ರಿಸಿದ್ದು ನೀವೇ ಅಲ್ಲವೇ? #VijayendraServiceTax…
— Karnataka Congress (@INCKarnataka) December 27, 2023
‘ಕರ್ನಾಟಕದ ಜನರನ್ನು ಕಾಡಿದ ಅತಿ ದೊಡ್ಡ ವೈರಸ್ ಭ್ರಷ್ಟ ಬಿಜೆಪಿಯೇ ಹೊರತು ಕರೋನವಲ್ಲ! ಸಾವಿನ ಮನೆಯಲ್ಲಿ ಭ್ರಷ್ಟಾಚಾರದ ಸಂಭ್ರಮಾಚರಣೆ ಮಾಡಿದ ಬಿಜೆಪಿ ಸರ್ಕಾರದ ಹಗರಣಗಳು ಬಿಜೆಪಿಗರಿಂದಲೇ ಬಯಲಾಗುತ್ತಿದೆ. ವಿಜಯೇಂದ್ರ ಅವರೇ, ಅಂದು ಶ್ಯಾಡೋ ಸಿಎಂ ಆಗಿ ಇಡೀ ಆಡಳಿತವನ್ನು ನಿಯಂತ್ರಿಸಿದ್ದು ನೀವೇ ಅಲ್ಲವೇ? #VijayendraServiceTax ಜಾರಿಗೊಳಿದ್ದು ನೀವೇ ಅಲ್ಲವೇ? 40 ಸಾವಿರ ಕೋಟಿ ಯಾರ ಜೇಬಿಗೆ ಇಳಿಯಿತು?’ ಅಂತಾ ಕಾಂಗ್ರೆಸ್ ಪ್ರಶ್ನಿಸಿದೆ.
ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ @BJP4Karnataka ಪಕ್ಷ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿಯ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟ.
ಮಾಜಿ ಶ್ಯಾಡೋ ಸಿಎಂ @BYVijayendra ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ…
— Karnataka Congress (@INCKarnataka) December 27, 2023
‘ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿಯ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟ. ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ ಜಾರಿರುವುದೇಕೆ? ತಮ್ಮಲ್ಲಿ ಸಾಚಾತನವಿದ್ದರೆ ಈ ಹಗರಣದ ತನಿಖೆಗೆ ಒತ್ತಾಯಿಸುತ್ತಿಲ್ಲವೇಕೆ?’ ಎಂದು ಕಾಂಗ್ರೆಸ್ ಕುಟುಕಿದೆ.
ಇದನ್ನೂ ಓದಿ: ಲೋಕಸಭೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ
40 ಸಾವಿರ ಕೋಟಿ ಹಗರಣದ ಆರೋಪವನ್ನು ಸ್ವತಃ ಬಿಜೆಪಿಯ ಹಿರಿಯ ನಾಯಕರೇ ಮಾಡಿದ್ದಾರೆ.
ಈ ಬಗ್ಗೆ ಉತ್ತರಿಸುವ ಹೊಣೆಗಾರಿಕೆ ಬಿಜೆಪಿ ಅಧ್ಯಕ್ಷ @BYVijayendra,
ವಿರೋಧ ಪಕ್ಷದ ನಾಯಕ @RAshokaBJP, ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ @KotasBJP ಅವರದ್ದು.40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ…
— Karnataka Congress (@INCKarnataka) December 27, 2023
40 ಸಾವಿರ ಕೋಟಿ ಹಗರಣದ ಆರೋಪವನ್ನು ಸ್ವತಃ ಬಿಜೆಪಿಯ ಹಿರಿಯ ನಾಯಕರೇ ಮಾಡಿದ್ದಾರೆ. ಈ ಬಗ್ಗೆ ಉತ್ತರಿಸುವ ಹೊಣೆಗಾರಿಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರದ್ದು. 40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ?’ ಅಂತಾ ಕಾಂಗ್ರೆಸ್ ಕಿಡಿಕಾರಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.