ಸಿದ್ದರಾಮಯ್ಯ ವಿರುದ್ದದ ನ್ಯಾಯಾಂಗ ನಿಂದನೆ ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್

    

Last Updated : Feb 16, 2018, 06:17 PM IST
 ಸಿದ್ದರಾಮಯ್ಯ ವಿರುದ್ದದ ನ್ಯಾಯಾಂಗ ನಿಂದನೆ ಅರ್ಜಿ ವಜಾಗೊಳಿಸಿದ ಸುಪ್ರಿಂಕೋರ್ಟ್  title=

ಬೆಂಗಳೂರು: 2013 ರಲ್ಲಿ  ತಮಿಳುನಾಡಿಗೆ ನಿಗಧಿತ ಪ್ರಮಾಣದಲ್ಲಿ ನೀರು ಹರಿಸಿಲ್ಲ ಎಂದು ಆರೋಪಿಸಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ತಮಿಳುನಾಡು ನ್ಯಾಯಾಂಗ ನಿಂದನೆ ಅರ್ಜಿಯನ್ನು ಸಲ್ಲಿಸಿತ್ತು. ಈಗ ಆ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.

ಕಾವೇರಿ ನದಿ ನೀರು ಹಂಚಿಕೆಯ ಕುರಿತ ಅಂತಿಮ ತೀರ್ಪಿನ ಸಂದರ್ಭದಲ್ಲಿ ತಮಿಳುನಾಡಿನ ಮನವಿಯನ್ನು ತಿರಸ್ಕರಿಸಿದ ದೀಪಕ್ ಮಿಶ್ರಾ ನೇತೃತ್ವದ ತ್ರೀಸದಸ್ಯ ಪೀಠ, ಈ ನ್ಯಾಯಾಂಗ ನಿಂದನೆಯ ಅರ್ಜಿಯನ್ನು ಮುಂದುವರೆಸುವುದಿಲ್ಲ, ಈ ವಿಷಯವನ್ನು ಇಲ್ಲಿಗೆ ಅಂತ್ಯಗೊಳಿಸಲಾಗಿದೆ ಎಂದು ತಿಳಿಸಿದೆ. ಆ ಮೂಲಕ ಇಂದು ಕೋರ್ಟ್ ಸಿದ್ದರಾಮಯ್ಯನವರಿಗೆ  ಡಬಲ್ ಖುಷಿ ನೀಡಿದೆ. ಒಂದು ಕಡೆ ಕಾವೇರಿ ತೀರ್ಪಿನ ಬಗ್ಗೆ ತೃಪ್ತಿ ತಂದಿದ್ದರೆ, ಇನ್ನೊಂದೆಡೆ ತಮ್ಮ ಮೇಲಿನ ನ್ಯಾಯಾಂಗ ನಿಂದನೆ ಕೇಸ್ ನ್ನು ಕೋರ್ಟ್ ವಜಾಗೊಳಿಸಿದೆ.ಇದರಿಂದ ಸಿದ್ದರಾಮಯ್ಯ ನವರಿಗೆ  ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಈ ಸಿಹಿ ಸುದ್ದಿ ಬಂದಿರುವುದು ನಿಜಕ್ಕೂ ಸಂತಸ ತಂದಿದೆ.

 

Trending News