PM Modi: ಪ್ರಯಾಗ್ರಾಜ್ನಲ್ಲಿ ಮಹಾಕುಂಭಮೇಳ ಅದ್ಧೂರಿಯಾಗಿ ಜರುಗುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪವಿತ್ರ ಸ್ನಾನ ಮಾಡಿದರು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.. ಈ ಕುರಿತು ಫೋಟೋಸ್ ಇಲ್ಲಿವೆ ನೋಡಿ..
ಪ್ರಧಾನಿ ನರೇಂದ್ರ ಮೋದಿ ಅವರು ಮಹಾಕುಂಭಮೇಳ ನಡೆಯುತ್ತಿರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿದರು.
ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರಯಾಗ್ರಾಜ್ಗೆ ಆಗಮಿಸಿದ ಪ್ರಧಾನಿಯವರನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭವ್ಯವಾಗಿ ಸ್ವಾಗತಿಸಿದರು.
ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಪವಿತ್ರ ತ್ರಿವೇಣಿ ಸಂಗಮದಲ್ಲಿ ದೋಣಿಯಲ್ಲಿ ಒಟ್ಟಿಗೆ ಪ್ರಯಾಣ ಬೆಳೆಸಿದರು. ನಂತರ ಪವಿತ್ರ ಸ್ನಾನ ಮಾಡಿದರು.
ಬೆಳಿಗ್ಗೆ ಪ್ರಯಾಗ್ರಾಜ್ಗೆ ಆಗಮಿಸಿದ ಪ್ರಧಾನಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ತ್ರಿವೇಣಿ ಸಂಗಮಕ್ಕೆ ತೆರಳಿದರು. ಅರೈಲ್ ಘಾಟ್ ನಿಂದ ದೋಣಿಯ ಮೂಲಕ ಸಂಗಮ್ ಘಾಟ್ ತಲುಪಿದರು.
ಈ ಸಮಯದಲ್ಲಿ ಪ್ರಧಾನಿಯವರು ಮಹಾಕುಂಭಮೇಳ ಪ್ರದೇಶದ ಬಗ್ಗೆ ಸಿಎಂ ಯೋಗಿ ಅವರಿಂದ ಮಾಹಿತಿಯನ್ನು ತಿಳಿದುಕೊಂಡರು. ಅದಾದ ನಂತರ ಸಂಗಮ್ ಘಾಟ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು..
ಪ್ರಧಾನಿ ಮೋದಿ ಕೈಯಲ್ಲಿ ರುದ್ರಾಕ್ಷಿ ಜಪಮಾಲೆ ಹಿಡಿದು ಮಂತ್ರಗಳನ್ನು ಪಠಿಸುತ್ತಾ ಸಂಗಮದಲ್ಲಿ ಮಿಂದೆದ್ದ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಪ್ರಯಾಗ್ರಾಜ್ನಲ್ಲಿ ಜನವರಿ 13 ರಂದು ಪುಷ್ ಪೂರ್ಣಿಮೆಯ ದಿನದಂದು ಮಹಾಕುಂಭಮೇಳ ಪ್ರಾರಂಭವಾಯಿತು. ಫೆಬ್ರವರಿ 26 ರಂದು ಮಹಾಶಿವರಾತ್ರಿಯವರೆಗೆ ಮುಂದುವರೆಯಲಿದೆ.