Gold and Silver Rate: ಬಂಗಾರದ ಬೆಲೆ ಇತ್ತೀಚಿನ ದಿನಗಳಲ್ಲಿ ಆಕಾಶ ನೋಡುತ್ತಿದೆ ಹೊರತು, ಇಳಿಮುಖವಾಗುತ್ತಿಲ್ಲ. ದಿನೇ ದಿನೇ ಏರುಗತಿಯಲ್ಲೇ ಸಾಗುತ್ತಿರುವ ಬೆಲೆಯನ್ನು ಕಂಡು ಮುಂದೊಂದು ದಿನ ಬಂಗಾರ ಖರೀದಿ ಸಾಧ್ಯವೇ ಎಂಬುದು ಜನರ ಪ್ರಶ್ನೆಯಾಗಿದೆ. ಈ ಬೆನ್ನಲ್ಲೇ ಆರ್ಥಿಕ ತಜ್ಞರು ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಬಂಗಾರದ ಬೆಲೆ ಇತ್ತೀಚಿನ ದಿನಗಳಲ್ಲಿ ಆಕಾಶ ನೋಡುತ್ತಿದೆ ಹೊರತು, ಇಳಿಮುಖವಾಗುತ್ತಿಲ್ಲ. ದಿನೇ ದಿನೇ ಏರುಗತಿಯಲ್ಲೇ ಸಾಗುತ್ತಿರುವ ಬೆಲೆಯನ್ನು ಕಂಡು ಮುಂದೊಂದು ದಿನ ಬಂಗಾರ ಖರೀದಿ ಸಾಧ್ಯವೇ ಎಂಬುದು ಜನರ ಪ್ರಶ್ನೆಯಾಗಿದೆ. ಈ ಬೆನ್ನಲ್ಲೇ ಆರ್ಥಿಕ ತಜ್ಞರು ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.
ಒಂದು ವಾರದ ಹಿಂದಷ್ಟೇ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದರು. ಈ ಸಂದರ್ಭದಲ್ಲಿ ಮಧ್ಯಮ ವರ್ಗಕ್ಕೆ ಸಿಹಿಸುದ್ದಿ ಕೊಟ್ಟಿದ್ದ ಅವರು, 12 ಲಕ್ಷವರೆಗಿನ ಆದಾಯಕ್ಕೆ ತೆರಿಗೆ ಇಲ್ಲ ಎಂದು ಘೋಷಿಸಿದ್ದರು. ಅದರ ಜೊತೆಗೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದರು.
ಈ ಘೋಷಣೆ ಬಳಿಕ ಮಧ್ಯಮ ವರ್ಗದ ಜನರಿಗೆ ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಕಸ್ಟಮ್ ಸುಂಕವನ್ನು ಶೇಕಡಾ 15 ರಿಂದ ಶೇಕಡಾ 6 ಕ್ಕೆ ಇಳಿಸಿದೆ. ಹೀಗಿರುವಾಗ ಏಪ್ರಿಲ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಭರ್ಜರಿಯಾಗಿ ಇಳಿಯುವ ಸಾಧ್ಯತೆ ಇದೆ. ಅಂದರೆ ಕೆಲ ಆರ್ಥಿಕ ತಜ್ಞರ ಅಭಿಪ್ರಾಯದಂತೆ ಏಪ್ರಿಲ್ ಬಳಿಕ ಚಿನ್ನದ ಬೆಲೆ 10 ಗ್ರಾಂಗೆ 50 ಸಾವಿರ ಸಮೀಪವಾಗಬಹುದು ಎನ್ನಲಾಗುತ್ತಿದೆ.
ಎಪ್ರಿಲ್ ವರೆಗೆ ಏಕೆ ಕಾಯಬೇಕು ಎಂಬುದು ಕೆಲವರ ಪ್ರಶ್ನೆಯಾಗಿರಬಹುದು. ಅದಕ್ಕೆ ಉತ್ತರ ಇಲ್ಲಿದೆ; ಹೊಸ ಬಜೆಟ್ ನಿರ್ಧಾರಗಳು ಏಪ್ರಿಲ್ 1 ರಿಂದ ಜಾರಿಗೆ ಬರುತ್ತವೆ. ಅದಾದ ನಂತರವಷ್ಟೇ ಚಿನ್ನ ಖರೀದಿ ಉತ್ತಮ ಎಂದು ತಜ್ಞರು ಹೇಳುತ್ತಿರುವುದು.
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ದ್ರವ್ಯತೆಯನ್ನು ಹೆಚ್ಚಿಸುವ ಮೂಲಕ ಬೇಡಿಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಅವುಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡಿದೆ. ಏಕೆಂದರೆ ಕಸ್ಟಮ್ ಸುಂಕ ಕಡಿತದಿಂದ ವ್ಯಾಪಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನು ಆಮದು ಮಾಡಿಕೊಳ್ಳುತ್ತಾರೆ. ಜೊತೆಗೆ ಅಕ್ರಮ ಚಿನ್ನ ಆಮದು ಕೂಡ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ.