'1990s' ಚಿತ್ರದ ಟ್ರೇಲರ್ ಅನಾವರಣಗೊಳಿಸಿದ ಡಾ. ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್

ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. "ತಟ್ ಅಂತ ಹೇಳಿ" ಕಾರ್ಯಕ್ರಮ ಹಾಗೂ ತಮ್ಮ ಪರಿಶುದ್ಧ ಕನ್ನಡದ ಮಾತಿನ‌ ಮೂಲಕ ಜನಪ್ರಿಯರಾಗಿರುವ ಡಾ|ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ "1990s" ಚಿತ್ರದ ಟ್ರೇಲರ್ ಅನಾವರಣ ಮಾಡಿದರು.

Written by - Bhavishya Shetty | Last Updated : Feb 11, 2025, 02:26 PM IST
    • ಹೊಸಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ
    • "1990s" ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ
    • ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಚಿತ್ರದ ಟ್ರೇಲರ್
'1990s' ಚಿತ್ರದ ಟ್ರೇಲರ್ ಅನಾವರಣಗೊಳಿಸಿದ ಡಾ. ನಾ.ಸೋಮೇಶ್ವರ್ ಹಾಗೂ ಇಂದ್ರಜಿತ್ ಲಂಕೇಶ್  title=
File Photo

ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನಗಳಿಗೆ ಕನ್ನಡ ಕಲಾಭಿಮಾನಿಗಳು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅಂತಹ ಹೊಸತಂಡವೊಂದರ ಹೊಸಪ್ರಯತ್ನ "1990s".  ನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ಸಿ.ಎಂ ನಿರ್ದೇಶಿಸಿರುವ ಹಾಗೂ ಅರುಣ್ - ರಾಣಿ ವರದ್ ನಾಯಕ, ನಾಯಕಿಯಾಗಿ ನಟಿಸಿರುವ "1990s" ಚಿತ್ರ 90ರ ಕಾಲಘಟ್ಟದಲ್ಲಿ ನಡೆಯುವ ಪ್ರೇಮಕಥೆ.

ಇದನ್ನೂ ಓದಿ:  ಪ್ರತಿದಿನ ಒಂದು ಗಂಟೆ ನಡೆಯೋದ್ರಿಂದ ತಿಂಗಳಲ್ಲಿ ಎಷ್ಟು ತೂಕ ಇಳಿಸಿಕೊಳ್ಳಬಹುದು?

ಈಗಾಗಲೇ ಹಾಡು ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. "ತಟ್ ಅಂತ ಹೇಳಿ" ಕಾರ್ಯಕ್ರಮ ಹಾಗೂ ತಮ್ಮ ಪರಿಶುದ್ಧ ಕನ್ನಡದ ಮಾತಿನ‌ ಮೂಲಕ ಜನಪ್ರಿಯರಾಗಿರುವ ಡಾ|ನಾ.ಸೋಮೇಶ್ವರ ಹಾಗೂ ಪತ್ರಕರ್ತ, ನಟ, ನಿರ್ಮಾಪಕ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ "1990s" ಚಿತ್ರದ ಟ್ರೇಲರ್ ಅನಾವರಣ ಮಾಡಿದರು.

ಟ್ರೇಲರ್ ವೀಕ್ಷಿಸಿ, ಮಾತನಾಡಿದ ನಾ. ಸೋಮೇಶ್ವರ್ ಅವರು ತಮ್ಮದೇ ಅದ ಶುದ್ದ ಕನ್ನಡದ ಮಾತುಗಳ ಮೂಲಕ ಟ್ರೇಲರ್ ಹಾಗೂ ಹಾಡಿನ ವಿಮರ್ಶೆ ಮಾಡಿ, ಹೊಸಬರ ಪ್ರಯತ್ನ ಯಶಸ್ವಿಯಾಗಲಿ ಎಂದರು.

ಟಿಕೆಟ್ ಬೆಲೆ ಕಡಿಮೆ ಆಗಬೇಕು ಹಾಗೂ ಕೆಲವು ಚಿತ್ರಮಂದಿಗಳಲ್ಲಿ ಆಸನ ಸೇರಿದಂತೆ ಎಲ್ಲಾ ವ್ಯವಸ್ಥೆಗಳು ಸರಿ ಹೋಗಬೇಕು ಎಂದು ಸಲಹೆ ನೀಡಿದ ಇಂದ್ರಜಿತ್ ಲಂಕೇಶ್, ಟ್ರೇಲರ್ ಚೆನ್ನಾಗಿದೆ. ಚಿತ್ರ ಸಹ ಇದೇ ರೀತಿ ಇರುತ್ತದೆ ಎಂಬ ಭರವಸೆ ಇದೆ ಎಂದರು.

ಚಿತ್ರದ ಹೆಸರೆ ಹೇಳುವಂತೆ ನಮ್ಮ ಚಿತ್ರದ ಕಥೆ 90 ರ ಕಾಲಘಟ್ಟದ್ದು. ಪ್ರೇಮಕಥೆಯೇ ಪ್ರಧಾನವಾದರೂ ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ಸಿ.ಎಂ.ನಂದಕುಮಾರ್ ತಿಳಿಸಿದರು.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ತಿಳಿಸಿದ ನಿರ್ಮಾಪಕರಲ್ಲೊಬ್ಬರಾದ ಅರುಣ್ ಕುಮಾರ್ ನಮ್ಮ ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.

ನಮ್ಮ ಚಿತ್ರಕ್ಕೆ ಮೊದಲಿನಿಂದಲೂ ಎಲ್ಲರೂ ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇದೇ 28 ರಂದು ಬಿಡುಗಡೆಯಾಗಲಿರುವ ನಮ್ಮ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲೇ ನೋಡಿ. ಬೆಂಬಲ ನೀಡಿ ಎಂದರು ನಾಯಕ ಅರುಣ್ ಹಾಗೂ ನಾಯಕಿ ರಾಣಿ ವರದ್.

ಇದನ್ನೂ ಓದಿ:  ಎಂಗೇಜ್ ಆದ್ರಾ ಸ್ಯಾಂಡಲ್​ವುಡ್ ಕ್ವೀನ್ ರಮ್ಯಾ? ಕೈಯಲ್ಲಿನ ಉಂಗುರ ನೋಡಿ ರಕ್ಷಿತಾ ಶಾಕ್‌! ಆ ಲಕ್ಕಿ ಮ್ಯಾನ್ ಯಾರು?

ನಟ ದೇವ್, ಸಂಗೀತ ನಿರ್ದೇಶಕ ಮಹಾರಾಜ,  ಛಾಯಾಗ್ರಾಹಕ ಹಾಲೇಶ್,  ಸಾಹಸ ನಿರ್ದೇಶಕ ಅಶೋಕ್, ನೃತ್ಯ ನಿರ್ದೇಶಕ ಸಾದಿಕ್ ಸರ್ದಾರ್, ಸಂಕಲನಕಾರ ಕೃಷ್ಣ ಮುಂತಾದ ಚಿತ್ರತಂಡದ ಸದಸ್ಯರು ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News