Rama Mandir chief priest Acharya Satyendra Das passes away: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಮೆದುಳು ಪಾರ್ಶ್ವವಾಯುವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆಲವೇ ದಿನಗಳ ಬಳಿಕ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.
ಇದನ್ನೂ ಓದಿ: ಶಾಕಿಂಗ್..!! ಪ್ರಿಯಕರನಿಂದ ಮಾಜಿ ಬಿಗ್ಬಾಸ್ ಸ್ಪರ್ಧಿಯ ಮೇಲೆ ಹಲ್ಲೆ.. ಕಿರುಕುಳ
ಲಕ್ನೋದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಸ್ಜಿಪಿಜಿಐ) ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಈ ದುಃಖದ ವಿಚಾರವನ್ನು ಅವರ ಶಿಷ್ಯ ಪ್ರದೀಪ್ ದಾಸ್ ದೃಢಪಡಿಸಿದ್ದಾರೆ. ಪ್ರದೀಪ್ ದಾಸ್ ಅವರ ಪ್ರಕಾರ, ಆಚಾರ್ಯ ಸತ್ಯೇಂದ್ರ ದಾಸ್ ಅವರ ಅಂತ್ಯಕ್ರಿಯೆ ಗುರುವಾರ ಅಯೋಧ್ಯೆಯ ಸರಯು ನದಿಯ ದಡದಲ್ಲಿ ನಡೆಯಲಿದ್ದು, ಸದ್ಯ ಪಾರ್ಥೀವ ಶರೀರವನ್ನು ಲಕ್ನೋದಿಂದ ಪವಿತ್ರ ನಗರಕ್ಕೆ ಕೊಂಡೊಯ್ಯಲಾಗುತ್ತಿದೆ.
ಮೆದುಳು ಪಾರ್ಶ್ವವಾಯುವಿಗೆ ತುತ್ತಾಗಿದ್ದ ಆಚಾರ್ಯ ಸತ್ಯೇಂದ್ರ ದಾಸ್ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನು ಅರ್ಚಕರು ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಯೋಗಿ ಆದಿತ್ಯನಾಥ್ ಸಂತಾಪ:
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಶೋಕ ಸಂದೇಶದಲ್ಲಿ"ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರ ನಿಧನ ಭರಿಸಲಾಗದ ನಷ್ಟ" ಎಂದು ಹೇಳಿದ್ದಾರೆ.
ಇದನ್ನೂ ಓದಿ: ಈ ಪುಟ್ಟ ಕಾಳನ್ನು ಬಾಯಲ್ಲಿಟ್ಟುಕೊಂಡರೆ, ತಕ್ಷಣ ಕಂಟ್ರೋಲ್ಗೆ ಬರುತ್ತೆ ಶುಗರ್! ಮತ್ತೆಂದೂ ಹೆಚ್ಚಾಗೋದೇ ಇಲ್ಲ
ಆಚಾರ್ಯ ಸತ್ಯೇಂದ್ರ ದಾಸ್ ಅವರು ರಾಮ ಮಂದಿರದಲ್ಲಿ ಅತಿ ಹೆಚ್ಚು ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ