ಭಾರತೀಯ ವಿಜ್ಞಾನ ಕ್ಷೇತ್ರದ ದಂತಕಥೆ ಹಾಗೂ ಮೊಟ್ಟಮೊದಲ ನೋಬಲ್ ಪಾರಿತೋಷಕ ಮುಡಿಗೇರಿಸಿಕೊಂಡು ಶಬ್ದ, ಬೆಳಕು, ಸ್ವರ, ನಾದಗಳಿಗೆ ವರ್ಣಮಯ ಬೆಳಕು ಚೆಲ್ಲಿದ ಧೀಮಂತ ಸಂಶೋಧಕ, ಭೌತವಿಜ್ಞಾನಕ್ಕೆ ಹೊಸ ಆಯಾಮ ನೀಡಿ, ಭೌತ ವಿಜ್ಞಾನ ಕ್ಷೇತ್ರದಲ್ಲಿ ಭಾರತದ ಹೆಸರು ಚಿರಸ್ಥಾಯಿಯಾಗಿ ನೆಲೆಗೊಳಿಸಿ ಶಾಶ್ವತ ಕೀರ್ತಿ ಪಡೆದ ಶ್ರೇಷ್ಠಾತಿ ಶ್ರೇಷ್ಠ ವಿಜ್ಞಾನಿ, ಅಪ್ರತಿಮ ಚಿಂತನಕಾರ ಪ್ರಯೋಗಶೀಲ ಪಟು. ಡಾ.ಸಿ.ವಿ.ರಾಮನ್.
ಚಂದ್ರಶೇಖರ್ ವೆಂಕಟರಾಮನ್ ನವೆಂಬರ್ 7. 1888ರಲ್ಲಿ ತಮಿಳುನಾಡಿನ ತಿರುಚನಾಪಳ್ಳಿ ತಿರುವನೈಕಾವಲ್ ಎಂಬಲ್ಲಿ ಜನಿಸಿದರು. ತಂದೆ ಚಂದ್ರಶೇಖರ್ ತಾಯಿ ಪಾರ್ವತಿ ಅಮ್ಮಾಳ್,
ರಾಮನ್ ಶಿಕ್ಷಣ :
ರಾಮನ್ರ ತಂದೆ ಅಧ್ಯಾಪಕರಾಗಿದ್ದರು. ಆದರೆ ಕುಟುಂಬ ದೊಡ್ಡದಾಗಿದ್ದರಿಂದ ಬಡತನದ ಸ್ಥಿತಿಯಲ್ಲಿದ್ದರು. ರಾಮನ್ಗೆ ಸಾಕಷ್ಟು ಶೈಕ್ಷಣಿಕ ಸೌಕರ್ಯಗಳನ್ನು ಒದಗಿಸುವ ಅನುಕೂಲ ಅವರಿಗಿರಲಿಲ್ಲ. ಆದರೆ ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ರಾಮನ್ ಹದಿನಾರನೇ ವಯಸ್ಸಿನಲ್ಲೇ ಬಿ.ಎ. ಮುಗಿಸಿಕೊಂಡರು. ತರುವಾಯ ಎಂ.ಎ. ಪರೀಕ್ಷೆಯಲ್ಲಿ ಪಾಸಾಗಿ ಅರ್ಥಶಾಖೆಯ ಅಧಿಕಾರಿಯಾಗಿ ಸೇನೆಯಲ್ಲಿ ತೊಡಗಿದರು. ವಿದ್ಯಾರ್ಥಿಯಾಗಿದ್ದಾಗ ವೈಜ್ಞಾನಿಕ ಪ್ರಯೋಗಗಳಲ್ಲಿ ತೋರುತ್ತಿದ್ದ ಆಸಕ್ತಿಯನ್ನು ಅವರು ವೃತ್ತಿನಿರತರಾಗಿದ್ದಾಗಲೂ ಮುಂದುವರಿಸಿದರು.
ಡಾ.ರಾಮನ್ ಮೇ 6, 1907ರಲ್ಲಿ ಲೋಕಸುಂದರಿ ಅಮ್ಮಾಳ್ ಎಂಬಾಕೆಯನ್ನು ವಿವಾಹವಾದರು. ರಾಮನ್, ಲೋಕಸುಂದರಿ ಅಮ್ಮಾಳ್ ದಂಪತಿಗಳಿಗೆ ಚಂದ್ರಶೇಖರ್ ಮತ್ತು ರಾಧಾಕೃಷ್ಣನ್ ಎಂಬ ಇಬ್ಬರು ಗಂಡುಮಕ್ಕಳಿದ್ದಾರೆ.
ರಾಮನ್ ಮಹೋನ್ನತ ಆವಿಷ್ಕಾರ :
ರಾಮನ್ ಪರಿಣಾಮ ಎಂಬ ತತ್ವವು ವಿಜ್ಞಾನಕ್ಕೆ ಸರ್ ಸಿ.ವಿ.ರಾಮನ್ರ ದೊಡ್ಡ ಕೊಡುಗೆ. ಆಕಾಶದ ನೀಲಿ ಬಣ್ಣ ಅವರನ್ನು ಸ್ಥಬ್ಬರನ್ನಾಗಿ ಮಾಡಿತ್ತು. ಅದು ಹೇಗೆ ಸಾಧ್ಯ? ಎಂಬ ಪ್ರಶ್ನೆ ರಾಮನ್ರನ್ನು ಮೊದಲಿನಿಂದಲೂ ಕಾಡುತ್ತಿತ್ತು. ಅದಕ್ಕೆ ಉತ್ತರ ಕಂಡು ಹಿಡಿಯಲು ಪ್ರಯೋಗ ಮಾಡುತ್ತಾ ಅವರು ಬಹಳ ಸಮಯವನ್ನು ವ್ಯಯಿಸಿದರು. ಸಮುದ್ರದ ಮೇಲೆ ವಿದೇಶ ಪ್ರಯಾಣದಲ್ಲಿದ್ದಾಗ ಕಡಲಿನ ನೀಲಿ ಬಣ್ಣದ ಕಾರಣವನ್ನು ಅರಿಯಲು ಪ್ರಯೋಗ ಮಾಡುತ್ತಾ ಹಡಗಿನ ತುಂಬಾ ಓಡಾಡುತ್ತಿದ್ದರಂತೆ. ರಾಮನ್ರ ಸಹಪ್ರಯಾಣಿಕರು ಇಸ್ಪೀಟ್ ಬಿಂಗೋಗಳನ್ನು ಆಡುತ್ತಿದ್ದಾಗ ರಾಮನ್ ಒಂದು ಪ್ಯಾಕೆಟ್ ಸ್ಪೆಕ್ಟೋಮೀಟರ್ನಲ್ಲಿ ಪ್ರಯೋಗಗಳನ್ನು ನಡೆಸುತ್ತಿದ್ದರು. ಹಾಗೂ ವಿವಿಧ ಮಾಧ್ಯಮಗಳಲ್ಲಿ ಬೆಳಕು ಪಸರಿಸುವ ಬಗ್ಗೆ ಒಂದು ಲೇಖನವನ್ನು ಬರೆದರು.
ಬೆಳಕಿನ ಆ ಸಂಶೋಧನೆ :
ರಾಮನ್ ಇದೇ ವಿಷಯದ ಮೇಲೆ ಗಂಭೀರ ಸಂಶೋಧನೆ ಆರಂಭಿಸಿದರು. ವಿವಿಧ ರೀತಿಯ ದ್ರವಗಳ ಮೂಲಕ ಅವರು ಬೆಳಕಿನ ರತ್ನಗಳನ್ನು ಹಾಯಿಸಿ ಅವುಗಳ ಪರಿಣಾಮಗಳ ಅಧ್ಯಯನ ಮಾಡಿದರು. ಒಂದೇ ಬಣ್ಣದ ಬೆಳಕನ್ನು ಒಂದು ದ್ರವದ ಮೂಲಕ ಹಾಯಿಸಿದಾಗ ಬೆಳಕಿನ ಆ ಭಾಗ ಹಾಗೂ ದ್ರವದ ಕಣಗಳು ಪರಸ್ಪರ ಕಲೆತು ಬೆಳಕನ್ನು ಚದುರಿಸುತ್ತದೆ. ಆಗ ಹೊರಸೂಸುವ ಬೆಳಕು ಮೂಲ ಕಿರಣಕ್ಕಿಂತ ಭಿನ್ನವಾದ ಬಣ್ಣವನ್ನೇ ಹೊಂದಿರುತ್ತದೆ. ಅದು ಪ್ರಾಸಂಗಿಕ ಬೆಳಕಿಗೆ ಸಂಬಂಧಿಸಿದಂತೆ ಶಕ್ತಿಯ ಹೆಚ್ಚಿನ ಹಾಗೂ ಕೆಳಗಿನ ಸ್ತರಗಳಿಗೆ ಮಾರ್ಪಡುತ್ತದೆ ಎಂಬುದನ್ನು ಕೊನೆಗೆ 1928ರಲ್ಲಿ ಸ್ಥಿರಪಡಿಸಿದರು. ಇದೇ ಬಹುಪ್ರಸಿದ್ಧವಾದ ಹಾಗೂ ನಂತರ ನೋಬೆಲ್ ಪಾರಿತೋಷಕ ತಂದುಕೊಟ್ಟ ರಾಮನ್ ಪರಿಣಾಮ' ಇದು ಅನ್ವಯಿಕ ಉಪಯುಕ್ತತೆಯುಳ್ಳ ತತ್ತ್ವ,
ರಾಮನ್ರವರಿಗೆ ಮನ್ನಣೆ ಗೌರವಗಳು ಬರುವುದಕ್ಕೆ ತಡವಾಗಲಿಲ್ಲ. ರಾಯಲ್ ಸೊಸೈಟಿಯಲ್ಲಿ ಸರ್ ಅರ್ನೆಸ್ಟ್ ರುಥರ್ಪೋರ್ಡ್ 'ರಾಮನ್ ಪರಿಣಾಮದ ಶೋಧ ಲೇಖನವನ್ನು ಪ್ರಕಟಿಸಿದರು.
ಹಾಗೂ ಬ್ರಿಟಿಷ್ ಸರ್ಕಾರ ರಾಮನ್ರವರಿಗೆ ನೈಟ್ ಹುಡ್ ಪ್ರಶಸ್ತಿ ಪ್ರದಾನ ಮಾಡಿತು. 1930ರ ಡಿಸೆಂಬರ್ 31ರಂದು ಅತ್ಯುನ್ನತ ಪ್ರಶಸ್ತಿಯಾದ ನೊಬೆಲ್ ಪಾರಿತೋಷಕ ಬಂದಿತು. ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯನ್ನರ ಹಾಗೂ ಬಿಳಿಯ ಜನಾಂಗದವರಲ್ಲಿ ಇವರೇ ಮೊದಲಿಗರು. ಇವರಿಗೂ ಮುಂಚೆ ರವೀಂದ್ರನಾಥ ಠಾಗೂರರು ಸಾಹಿತ್ಯಕ್ಕಾಗಿ ನೊಬೆಲ್ ಪ್ರಶಸ್ತಿ ಪಡೆದಿದ್ದರು. ನಂತರ 1983ರಲ್ಲಿ ರಾಮನ್ರವರ ಸೋದರ ಅಳಿಯ ಸುಬ್ರಹ್ಮಣ್ಯನ್ ಚಂದ್ರಶೇಖರ್ ನೊಬೆಲ್ ಪ್ರಶಸ್ತಿ ಗಳಿಸಿದರು.
> ತಮ್ಮ 12ನೇ ವಯಸ್ಸಿನಲ್ಲೇ ಮೆಟ್ರಿಕ್ಯುಲೆಶನ್ ಮುಗಿಸಿದರು.
> ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಎಸ್ಸಿ (1904) ಪದವಿ.
> ಎಂ.ಎಸ್ಸಿ (1907) ಪದವಿಗಳನ್ನು ಗಳಿಸಿದರು.
> 1907ರಲ್ಲಿ ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಕಲ್ಕತ್ತೆಯಲ್ಲಿ ಡೆಪ್ಯುಟಿ ఆల్రౌంటింట్ ಜನರಲ್ en వృక్తి ಜೀವನ ಆರಂಭಿಸಿದರು. ವಿದ್ಯಾರ್ಥಿಯಾಗಿದ್ದಾಗ ವೈಜ್ಞಾನಿಕ ಪ್ರಯೋಗಗಳಲ್ಲಿ ತೋರುತ್ತಿದ್ದ ಆಸಕ್ತಿಯನ್ನು ಅವರು ವೃತ್ತಿನಿರತರಾಗಿದ್ದಾಗಲೂ ಮುಂದುವರಿಸಿದರು.
> 1917ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರದ ಪ್ರಾಚಾರ್ಯರಾದರು.
> 1924ರಲ್ಲಿ ಲಂಡನಿನ ಫೆಲೋ ಆಫ್ ರಾಯಲ್ ಸೊಸೈಟಿಗೆ ರಾಮನ್ ಆಯ್ಕೆಯಾದರು.
> ಮಾರ್ಚ್ 16 1928ರಲ್ಲಿ ತಮ್ಮ ಶೋಧನೆ. ರಾಮನ್ ಎಫೆಕ್ಸನ್ನು ಬೆಂಗಳೂರಿನಲ್ಲಿ ಬಹಿರಂಗಪಡಿಸಿದ ರಾಮನ್ 1930ರಲ್ಲಿ ಅದಕ್ಕಾಗಿ 'ನೋಬೆಲ್ ಪ್ರಶಸ್ತಿ ಗಳಿಸಿದರು.
ಗೌರವ ಪ್ರಶಸ್ತಿಗಳು :-
> 'ಫೆಲೋ ಆಫ್ ರಾಯಲ್ ಸೊಸೈಟಿ ಸದಸ್ಯತ್ವ' (1924)
> ನೈಟ್ ಹುಡ್ ಪ್ರಶಸ್ತಿ (1929)
> 'ನೋಬೆಲ್ ಪ್ರಶಸ್ತಿ' (1930)
> 'ಮೈಸೂರು ಮಹಾರಾಜರಿಂದ ರಾಜಸಭಾ ಭೂಷಣ ಗೌರವ' (1935)
> ಭಾರತ ರತ್ನ ಪ್ರಶಸ್ತಿ (1954)
'ರಾಮನ್ ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡೆಮಿಯ ಸ್ಥಾಪಕ ಸದಸ್ಯರಾಗಿದ್ದರು. ರಾಮನ್ ಸಂಗೀತ ವಾದ್ಯಗಳ ದ್ವತಿಗತಿ ವಿಜ್ಞಾನದ ಮೇಲೂ ಕೆಲಸ ಮಾಡಿದರು. ಅವರು ಅಧ್ಯಾರೋಪಣ ವೇಗದ ಆಧಾರದ ಮೇಲೆ ಕಮಾನು ತಂತಿಗಳ ಅಡ್ಡಕಂಪನಗಳ ಸಿದ್ಧಾಂತವನ್ನು ರೂಪಿಸಿದರು. ತಬಲ ಮತ್ತು ಮೃದಂಗ ಮುಂತಾದ ಭಾರತೀಯ ಚರ್ಮ ವಾದ್ಯಗಳ ಶಬ್ದದ ಆವರ್ತಕ ಸ್ವರೂಪವನ್ನು ಕಂಡುಹಿಡಿದವರಲ್ಲಿ ಮೊದಲಿಗರು. 1943ರಲ್ಲಿ ಟ್ರಾವಂಕೂರ್ ಕೆಮಿಕಲ್ ಅಂಡ್ ಮ್ಯಾನುಫ್ಯಾಕ್ಟರಿಂಗ್ ಕಂಪನಿ ಲಿಮಿಟೆಡ್ ಎಂಬ ಕಂಪನಿಯನ್ನು ಆರಂಭಿಸಿದರು.
1934ರಲ್ಲಿ ಬೆಂಗಳೂರಿನ ಇಂಡಿಯನ್ ಇನ್ಸಿಟ್ಯೂಟ್ ಆಫ್ ಸೈನ್ಸ್ನ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಡಾ.ರಾಮನ್ ನಂತರ 1943ರಲ್ಲಿ ರಾಮನ್ ಸಂಶೋಧನಾ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರು. ಪ್ರೊ.ರಾಮನ್ ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವಾಗಿ ಮಾಡಿಕೊಂಡು ರಾಮನ್ ರೀಸರ್ಚ್ ಇನ್ಸಿಟ್ಯೂಟ್ ಎಂಬ ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು ಅವರ ಜೀವಿತ ಕಾಲದಲ್ಲೇ ಸ್ಥಾಪಿಸಿ ಬಹಳಷ್ಟು ಸಂಶೋಧನೆಗಳನ್ನು ಮಾಡಿದರು. ಬಾವಿ ಸಂಶೋಧಕರಿಗೆ ಬಿಟ್ಟು ಹೋಗಿರುವ ಈ ಸಂಸ್ಥೆ ವಿಶೇಷವಾಗಿ ಭೌತಶಾಸ್ತ್ರದ ಅತ್ಯಂತ ಪ್ರಮುಖ ಸಂಶೋಧನ ಸಂಸ್ಥೆಯಾಗಿದೆ.
'ಭಾರತ ರತ್ನ ಪ್ರಶಸ್ತಿ ಮತ್ತು ನೊಬೆಲ್ ಪಾರಿತೋಷಕ ಪಡೆದ ಸರ್ ಸಿ.ವಿ.ರಾಮನ್ ನವೆಂಬರ್ 21 1970 ರಂದು ಶಬ್ದ ಮತ್ತು ಬೆಳಕಿನ ವಿಶೇಷ ಸಂಶೋಧನೆ ಮಾಡಿದ ಚಂದ್ರಶೇಖರ್ ವೆಂಕಟರಾಮನ್ ನಿಧನರಾದರು.
ರಾಷ್ಟ್ರೀಯ ವಿಜ್ಞಾನ ದಿನ
ರಾಮನ್ಗೆ ನೋಬಲ್ ಪ್ರಶಸ್ತಿ ಬಂದ ಸುದಿನವನ್ನು ಭಾರತ ದೇಶದಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸುತ್ತಾ ರಾಮನ್ ಹೆಸರನ್ನು ಹಸಿರಾಗಿರಿಸಿದ್ದಾರೆ.
ಲೇಖಕರು: ಡಾ.ಡಿ.ಸಿ.ರಾಮಚಂದ್ರ
ಶ್ರೀ ಕ್ಷೇತ್ರ ಆದಿಚುಂಚನಗಿರಿ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.