ನವದೆಹಲಿ: ಟೀಮ್ ಇಂಡಿಯಾ ಫೆಬ್ರವರಿ 6 ರಿಂದ ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಈ ಸರಣಿ ಚಾಂಪಿಯನ್ಸ್ ಟ್ರೋಫಿಯ ದೃಷ್ಟಿಯಿಂದ ಎರಡೂ ತಂಡಗಳಿಗೆ ಬಹಳ ಮುಖ್ಯವಾಗಿವೆ.
ಆದರೆ ಈಗ ಈ ಏಕದಿನ ಸರಣಿಗೂ ಮುನ್ನ ಭಾರತಕ್ಕೆ ಆಘಾತ ಎದುರಾಗಿದೆ, ಹೌದು ಅಷ್ಟಕ್ಕೂ ಏನಂತೀರಾ? ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಗಾಯಗೊಂಡು ಇಂಗ್ಲೆಂಡ್ ವಿರುದ್ಧದ ಸರಣಿಯಿಂದ ಹೊರಗೆ ಉಳಿದಿರುವುದು ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲೂ ಅವರು ಆಡುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆಗಳು ಎದುರಾಗಿವೆ.ಇದಕ್ಕೆ ಕಾರಣ ಈಗ ಟೀಮ್ ಇಂಡಿಯಾಗೆ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ಸೇರಿಸಿಕೊಂಡಿರುವುದು.
ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅದ್ಬುತ ಪ್ರದರ್ಶನವನ್ನು ನೀಡಿದ್ದ ಬುಮ್ರಾ, ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಐದನೇ ಟೆಸ್ಟ್ ಪಂದ್ಯದ ಸಮಯದಲ್ಲಿ ಬೆನ್ನಿನ ಗಾಯಕ್ಕೆ ಒಳಗಾಗಿದ್ದರಿಂದಾಗಿ ಅವರಿಗೆ ಐದು ವಾರಗಳ ಕಾಲ ವಿಶ್ರಾಂತಿಯನ್ನು ನೀಡಲಾಗಿತ್ತು, ಆದರೆ ಈಗ ಇದುವರೆಗೂ ಬುಮ್ರಾ ಅವರ ಫಿಟ್ ನೆಸ್ ಕುರಿತಾಗಿ ಯಾವುದೇ ಮಾಹಿತಿಯನ್ನು ಬಿಸಿಸಿಐ ನೀಡಿಲ್ಲ, ಹೀಗಾಗಿ ಅವರು ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗೆ ಉಳಿವ ಸಾಧ್ಯತೆ ಅಧಿಕವಾಗಿದೆ.
ಇದನ್ನೂ ಓದಿ: "ಟೀಸರ್ ಹಾಗೂ ಹಾಡುಗಳಲ್ಲಿ "ನೆನಪುಗಳ ಮಾತು ಮಧುರ"
ಈಗ ಅದಕ್ಕೂ ಮುನ್ನ ಪರ್ಯಾಯ ನೆಲೆಯನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಬಿಸಿಸಿಐ ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ಪ್ರಾಯೋಗಿಕವಾಗಿ ಬೇರೆ ಆಟಗಾರನ ಪ್ರಯೋಗಕ್ಕೆ ಮುಂದಾಗಿದೆ.ಫೆಬ್ರವರಿ 12 ರಂದು ಇಂಗ್ಲೆಂಡ್ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಬುಮ್ರಾ ಆಡಬಹುದೆಂಬ ಊಹಾಪೋಹಗಳಿದ್ದವು.ಬುಮ್ರಾ ಗಾಯದ ಬಗ್ಗೆ ಅಜಿತ್ ಅಗರ್ಕರ್, 'ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಏಕದಿನ ಪಂದ್ಯಗಳಿಗೆ ಬುಮ್ರಾ ಲಭ್ಯವಿರುವುದಿಲ್ಲ' ಎಂದು ಹೇಳಿದ್ದರು.ಆದರೆ ಅವರ ಹೆಸರು ಬಿಸಿಸಿಐನ ನವೀಕರಿಸಿದ ತಂಡದಲ್ಲಿಲ್ಲ. ಹಾಗಾಗಿ ಈ ಸರಣಿಯಲ್ಲಿ ಅವರು ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ.
ಚಾಂಪಿಯನ್ಸ್ ಟ್ರೋಫಿಗಾಗಿ ಫೆಬ್ರವರಿ 12 ರವರೆಗೆ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲು ಅವಕಾಶವಿರುವುದರಿಂದ, ಬುಮ್ರಾ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಭಾರತಕ್ಕೆ ಎಂಟು ದಿನಗಳ ಕಾಲಾವಕಾಶವಿದೆ. ಆದಾಗ್ಯೂ, ಗಡುವಿನ ನಂತರವೂ ತಂಡಗಳು ಗಾಯಗೊಂಡ ಆಟಗಾರರನ್ನು ಬದಲಾಯಿಸಬಹುದು, ಆದರೆ ಅವರಿಗೆ ಐಸಿಸಿ ತಾಂತ್ರಿಕ ಸಮಿತಿಯಿಂದ ಅನುಮತಿ ಬೇಕಾಗುತ್ತದೆ.
ಇದನ್ನೂ ಓದಿ: ಫೆಬ್ರವರಿ 7ಕ್ಕೆ ರೂಪೇಶ್ ಶೆಟ್ಟಿ ಹಾಗೂ ಜಾಹ್ನವಿ ನಟನೆಯ ಅಧಿಪತ್ರ ರಿಲೀಸ್
ಭಾರತ ತಂಡವು ಫೆಬ್ರವರಿ 6, 9 ಮತ್ತು 12 ರಂದು ಕ್ರಮವಾಗಿ ನಾಗ್ಪುರ, ಕಟಕ್ ಮತ್ತು ಅಹಮದಾಬಾದ್ನಲ್ಲಿ ಇಂಗ್ಲೆಂಡ್ ವಿರುದ್ಧ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಇದರ ನಂತರ, ರೋಹಿತ್ ಶರ್ಮಾ ನೇತೃತ್ವದ ತಂಡವು ಫೆಬ್ರವರಿ 20 ರಂದು ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ಚಾಂಪಿಯನ್ಸ್ ಟ್ರೋಫಿಯಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಫೆಬ್ರವರಿ 23 ಮತ್ತು ಮಾರ್ಚ್ 2 ರಂದು ಭಾರತ ತಂಡ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳನ್ನು ಎದುರಿಸಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.