ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಎರಡು ತಂಡಗಳನ್ನು ಹಗುರವಾಗಿ ಪರಿಗಣಿಸಬೇಡಿ: ಟೀಂ ಇಂಡಿಯಾಗೆ ಆರ್‌.ಅಶ್ವಿನ್‌ ಎಚ್ಚರಿಕೆ

R Ashwin statement on Champions Trophy:ಟ್ರೆಂಟ್ ಬೌಲ್ಟ್ ಮತ್ತು ಟಿಮ್ ಸೌಥಿ ಅನುಪಸ್ಥಿತಿಯಲ್ಲಿಯೂ ನ್ಯೂಜಿಲೆಂಡ್ ಭಾರತಕ್ಕೆ ಕಠಿಣ ಸವಾಲು ಒಡ್ಡಲಿದೆ. ಜೊತೆಗೆ ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಯಾವಾಗಲೂ ಬಲಿಷ್ಠ ತಂಡವಾಗಿದೆ. ಇವೆರಡನ್ನೂ ಕಡೆಗಣಿಸಬಾರದು ಎಂದು ಅಶ್ವಿನ್‌ ಎಚ್ಚರಿಕೆ ನೀಡಿದ್ದಾರೆ.

Written by - Bhavishya Shetty | Last Updated : Feb 9, 2025, 07:45 PM IST
    • ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಬಲಿಷ್ಠ ತಂಡಗಳು
    • ಆಸ್ಟ್ರೇಲಿಯಾ ತಂಡವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ
    • ಲೆಜೆಂಡರಿ ಸ್ಪಿನ್ನರ್ ಆರ್. ಅಶ್ವಿನ್ ಹೇಳಿಕೆ
ಚಾಂಪಿಯನ್ಸ್ ಟ್ರೋಫಿಯಲ್ಲಿ ಈ ಎರಡು ತಂಡಗಳನ್ನು ಹಗುರವಾಗಿ ಪರಿಗಣಿಸಬೇಡಿ: ಟೀಂ ಇಂಡಿಯಾಗೆ ಆರ್‌.ಅಶ್ವಿನ್‌ ಎಚ್ಚರಿಕೆ title=
R Ashwin statement

R Ashwin statement on Champions Trophy: ಚಾಂಪಿಯನ್ಸ್ ಟ್ರೋಫಿಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಬಲಿಷ್ಠ ತಂಡಗಳು ಎಂದು ಲೆಜೆಂಡರಿ ಸ್ಪಿನ್ನರ್ ಆರ್. ಅಶ್ವಿನ್ ಹೇಳಿದ್ದಾರೆ. ಪ್ರಮುಖ ಆಟಗಾರರು ಗಾಯಗೊಂಡಿದ್ದರೂ ಆಸ್ಟ್ರೇಲಿಯಾ ತಂಡವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಏಕೆಂದರೆ ಈ ತಂಡವು ದೊಡ್ಡ ಪಂದ್ಯಾವಳಿಗಳಲ್ಲಿ ತನ್ನ ಆಟದ ಶ್ರೇಷ್ಠ ಸ್ಥಾನದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಚಿಕ್ಕ ನ್ಯೂಸ್ ಆಧರಿಸಿ ನಿರ್ಮಿಸಿದ ʼಈʼ ಸಿನಿಮಾ ₹423 ಕೋಟಿ ಲೂಟಿ ಮಾಡಿತ್ತು; ಯಾವುದು ಗೊತ್ತಾ ದಿಗ್ಗಜರು ನಟಿಸಿದ ಆ ಸಿನಿಮಾ?

ಈ ಐಸಿಸಿ ಟೂರ್ನಮೆಂಟ್ ಫೆಬ್ರವರಿ 19 ರಂದು ಪಾಕಿಸ್ತಾನದಲ್ಲಿ ಪ್ರಾರಂಭವಾಗಲಿದೆ. ಆದರೆ ಭಾರತ ತನ್ನ ಎಲ್ಲಾ ಪಂದ್ಯಗಳನ್ನು ಹೈಬ್ರಿಡ್ ಮಾದರಿಯಡಿಯಲ್ಲಿ ದುಬೈನಲ್ಲಿ ಆಡಲಿದೆ. ಫೆಬ್ರವರಿ 20 ರಿಂದ ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಟೀಮ್ ಇಂಡಿಯಾ ಅಭಿಯಾನ ಆರಂಭವಾಗಲಿದೆ.

ಅಶ್ವಿನ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ದುಬೈ ಮೈದಾನದಲ್ಲಿ ಆಡುವ ಪ್ರಯೋಜನವನ್ನು ಭಾರತ ಪಡೆಯಲಿದೆ. ಭಾರತವನ್ನು ಎದುರಿಸುವ ತಂಡಗಳು ಭಾರತದ ಪರಿಸ್ಥಿತಿಗಳಲ್ಲಿ ಆಡುತ್ತಿದ್ದೇವೆ ಎಂದು ಭಾವಿಸುತ್ತವೆ. ಇದು ಖಂಡಿತವಾಗಿಯೂ ಇತರ ತಂಡಗಳಿಗೆ ಸಮಸ್ಯೆಯಾಗಿದೆ. ಹಲವು ವರ್ಷಗಳ ನಂತರ ತ್ರಿಕೋನ ಸರಣಿಯು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮರಳಿದ್ದು, ಚಾಂಪಿಯನ್ಸ್ ಟ್ರೋಫಿಗೆ ಉತ್ತಮವಾಗಿ ತಯಾರಿ ನಡೆಸಲು ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ದ್ವಿಪಕ್ಷೀಯ ಸರಣಿಯ ಬದಲಿಗೆ ತ್ರಿಕೋನ ಪಂದ್ಯಾವಳಿಯಲ್ಲಿ ಆಡಬೇಕಿತ್ತು" ಎಂದು ಅಶ್ವಿನ್ ನಂಬಿದ್ದಾರೆ.

"ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪಾಕಿಸ್ತಾನದ ಪರಿಸ್ಥಿತಿಯಲ್ಲಿ ಆಡುತ್ತಿದ್ದು, ಇದು ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರಿಗೆ ಸಹಾಯ ಮಾಡುತ್ತದೆ. ಈ ದೊಡ್ಡ ಟೂರ್ನಮೆಂಟ್‌ಗೂ ಮೊದಲು ಭಾರತ ಇಂಗ್ಲೆಂಡ್ ವಿರುದ್ಧ ಮಾತ್ರ ಆಡಿದೆ. ದುಬೈನಲ್ಲಿ ನಡೆದ ಕಳೆದ ಟಿ20 ವಿಶ್ವಕಪ್‌ನ ಯಾವುದೇ ಸಿಹಿ ನೆನಪುಗಳು ನಮಗಿಲ್ಲ. ದುಬೈನಲ್ಲಿ ಟಾಸ್ ನಿಜವಾಗಿಯೂ ಮುಖ್ಯವಾಗುತ್ತದೆ. ಟಾಸ್ ಗೆಲ್ಲುವುದು ಮುಖ್ಯ ಎಂದು ನಾನು ಭಾವಿಸುತ್ತೇನೆ" ಎಂದಿದ್ದಾರೆ.

ಇದನ್ನೂ ಓದಿ:  ಮೀನ ರಾಶಿಯಲ್ಲಿ ಶನಿ.. 30 ವರ್ಷ ನಂತರ ಈ ರಾಶಿಗಳಿಗೆ ರಾಜಯೋಗ, ಕಡು ಬಡವನೂ ಕೋಟ್ಯಾಧೀಶನಾಗುವ ಅದೃಷ್ಟದ ಕಾಲ.. ಹಣದ ಕೊರತೆ ಇನ್ನೂ ಬರೋದಿಲ್ಲ!

ಟ್ರೆಂಟ್ ಬೌಲ್ಟ್ ಮತ್ತು ಟಿಮ್ ಸೌಥಿ ಅನುಪಸ್ಥಿತಿಯಲ್ಲಿಯೂ ನ್ಯೂಜಿಲೆಂಡ್ ಭಾರತಕ್ಕೆ ಕಠಿಣ ಸವಾಲು ಒಡ್ಡಲಿದೆ. ಜೊತೆಗೆ ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಯಾವಾಗಲೂ ಬಲಿಷ್ಠ ತಂಡವಾಗಿದೆ. ಇವೆರಡನ್ನೂ ಕಡೆಗಣಿಸಬಾರದು ಎಂದು ಅಶ್ವಿನ್‌ ಎಚ್ಚರಿಕೆ ನೀಡಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News