ರಾಯಚೂರು ಜಿಲ್ಲೆಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಲಿಂಗಸೂಗುರ್ ತಾಲೂಕಿನ ಗುಡದನಾಳ ಗ್ರಾಮದಲ್ಲಿ ಮಳೆರಾಯನ ಆರ್ಭಟಕ್ಕೆ ಮನೆ ಗೋಡೆ ಕುಸಿದಿದೆ.. ಮನೆ ಗೋಡೆ ಕುಸಿದು ಪಕ್ಕದ ರಸ್ತೆ ಸಂಪೂರ್ಣ ಬಂದ್ ಆಗಿದೆ.
ಹುಬ್ಬಳ್ಳಿಯಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದ್ದು ಅವಾಂತರ ಸೃಷ್ಟಿಸಿದೆ.. ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ಟ್ರ್ಯಾಕ್ಟರ್ ಮಳೆಯಿಂದ ಕೊಚ್ಚಿಹೋಗಿದೆ. ಮಂಟೂರ ಗ್ರಾಮ ಸಂಪೂರ್ಣ ಜವಾವೃತವಾಗಿದೆ..
ಅಥಣಿ ತಾಲೂಕಿನಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಯಲ್ಲಮ್ಮವಾಡಿ ಕೆರೆ ತುಂಬಿ ದೇವಸ್ಥಾನ ಮುಂಭಾಗದ ಹಳ್ಳದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದು, ದೇವಸ್ಥಾನ ಸುತ್ತಲೂ ನೀರು ಆವರಿಸಿದೆ. ನವರಾತ್ರಿ ಹಬ್ಬದ ಪ್ರಯುಕ್ತ ದಿನನಿತ್ಯ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ದೇವಸ್ಥಾನ ಜಲ ದಿಗ್ಬಂಧನಗೊಂಡ ಹಿನ್ನೆಲೆ ಭಕ್ತರು ಹಳ್ಳ ದಾಟಿಕೊಂಡು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ.
ಚಿತ್ರದುರ್ಗದಲ್ಲಿ ಮಳೆಯ ಆರ್ಭಟ ನಿಂತಿಲ್ಲ. ಎಲ್ಲೆಡೆ ಕೆರೆ ಕಟ್ಟೆಗಳು ಭರ್ತಿಯಾಗಿವೆ. ರಸ್ತೆಗಳೆನ್ನದೇ ಎಲ್ಲಾ ಕೆರೆಗಳು ಉಕ್ಕಿ ಹರಿಯುತ್ತಿವೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಖಾನೆಹಳ್ಳದಲ್ಲಿ ಸೋಮವಾರ ರಾತ್ರಿ ಕೆಲಸ ಮುಗಿಸಿ ಮನೆ ಹೊರಟಿದ್ದ ಕೊರ್ಲಕುಂಟೆ ಗ್ರಾಮದ ಇಬ್ಬರು ಯುವಕರು ನೀರಿನ ರಭಸಕ್ಕೆ ಕೊಚ್ಚಿಹೋಗಿ ಶವವಾಗಿ ಪತ್ತೆಯಾಗಿದ್ದಾರೆ.
ಮಹಾರಾಷ್ಟ್ರ ಪಶ್ಚಿಮಘಟ್ಟ ಪ್ರದೇಶ ಧಾಕಾಕಾರ ಮಳೆ ಹಿನ್ನೆಲೆ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರ್ತಿದೆ. ಚಿಕ್ಕೋಡಿ ಉಪವಿಭಾಗದಲ್ಲಿ 4 ಸೇತುವೆಗಳು ಮುಳುಗಡೆಯಾಗಿದೆ. ಮತ್ತೊಂದೆಡೆ ಹಿಡಕಲ್ ಜಲಾಶಯದಿಂದ 20ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಘಟಪ್ರಭಾ ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ಕೊಟ್ಟಿದೆ.
ರಾಜ್ಯ ರಾಜಧಾನಿಗೆ ಮತ್ತೆ ಮಳೆ ಆತಂಕ ಎದುರಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನವೆಂಬರ್ ವರೆಗೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.