ಬೆಂಗಳೂರು ನಗರದಲ್ಲಿ ಮಳೆ ಹಾನಿ ಹಿನ್ನೆಲೆ ಇಂದು ಮಧ್ಯಾಹ್ನ ಹಾನಿಗೀಡಾದ ಪ್ರದೇಶಗಳಿಗೆ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ಅವಾಂತರ ಮುಂದುವರೆದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಚಿಕ್ಕಬಳ್ಳಾಪುರ ನಗರದ ಮಂಚನಬಲೆ ಅಂಡರ್ ಪಾಸ್ ಜಲಾವೃತವಾಗಿದೆ.
ಗಡಿಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದೆ. ಯಳಂದೂರು ತಾಲೂಕಿನ ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತವಾಗಿದೆ. ಮಾಂಬಳ್ಳಿ ಠಾಣೆ ತುಂಬೆಲ್ಲಾ 3-4 ಅಡಿ ನೀರು ನಿಂತು ಅವಾಂತರ ಸೃಷ್ಟಿಸಿದೆ.
ಬೆಂಗಳೂರಿನ ದಿಕ್ಕು ದಿಕ್ಕುಗಳಲ್ಲೂ ಮಳೆ ಅಲ್ಲೋಲ ಕಲ್ಲೋಲ ಸೃಷಿಸಿದೆ. ನಗರದೆಲ್ಲೆಡೆ ಇನ್ನೂ ಐದು ದಿನ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾರಿ ಮಳೆಯಾಗೋ ಮುನ್ಸೂಚನೆ ನೀಡಲಾಗಿದೆ. ಜೋರು ಗಾಳಿ, ಗುಡುಗು ಮಿಂಚಿನೊಂದಿಗೆ ಮಳೆಯಾಗೋ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ನೀಡಲಾಗಿದೆ.
ರಾಯಚೂರು ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ರಾಯಚೂರಿನ ಸಿರವಾರ-ಕುರುಕುಂದ ಬಳಿ ನೀರಿನ ರಭಸಕ್ಕೆ ಕಾಲುವೆ ಒಡೆದುಹೋಗಿದೆ. ಕಳಪೆ ಕಾಮಗಾರಿಯಿಂದ ಕಾಲುವೆ ಒಡೆದು ಹೋಗಿದ್ದು, ಏಕಾಏಕಿ ಅಕ್ಕಪಕ್ಕದ ಹೊಲ-ಗದ್ದೆಗಳಿಗೆ ನೀರು ನುಗ್ಗಿದೆ.
ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು ಅವಾಂತರ ಸೃಷ್ಟಿಸಿದೆ. ರಾಯಚೂರಿನ ಮೀರಾಪೂರ್ ಗ್ರಾಮದಲ್ಲಿ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ನಾರಾಯಣ ಬಲದಂಡೆ ಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಅಕ್ಕಪಕ್ಕದ ಹೊಲ-ಗದ್ದೆಗಳಿಗೆ ನೀರು ನುಗ್ಗಿದೆ. ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರದ ಜಲಪಾತ ಧುಮ್ಮುಕ್ಕುತ್ತಿದೆ.
ರಾಜ್ಯದೆಲ್ಲೆಡೆ ಮತ್ತೆ ಮಳೆ ಅಬ್ಬರಿಸಿದೆ. ಹಾವೇರಿ ಗ್ರಾಮೀಣ ಭಾಗದ ಜನರು ಮಳೆಯಿಂದ ನಲುಗಿ ಹೋಗಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಿಂದ ಹೊರಬರದೇ ಜನ ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ.
Actor Jaggesh : ರಾಜ್ಯ ಸಭಾ ಸದಸ್ಯ, ನಟ ಜಗ್ಗೇಶ್ ಸಹ ಮಳೆಯ ಅವಾಂತರಕ್ಕೆ ಪರದಾಡುವಂತಾಗಿದೆ. ನವರಸನಾಯಕ ಜಗ್ಗೇಶ್ ಅವರ ಮಾಯಸಂದ್ರದ ಮನೆಗೆ ನೀರು ನಿಗ್ಗಿದ್ದು, ಈ ಕುರಿತು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಳೆಗೆ ಶಾಲೆ ಹಾಗೂ ಮನೆಗಳು ಜಲಾವೃತ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರಿನಲ್ಲಿ ಮುಳುಗಡೆ. ರಾಯಚೂರು ಜಿಲ್ಲೆಯಲ್ಲಿ ಸುರಿದ ಮಳೆಗೆ ಅಪಾರ ಹಾನಿ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಕ್ಕಲದೊಡ್ಡಿ ಗ್ರಾಮದಲ್ಲಿ ಘಟನೆ. ಗ್ರಾಮದ ಬಹುತೇಕ ಮನೆಗಳಿಗೆ ನುಗ್ಗಿದ ನೀರು.
ರಾಮನಗರ ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ. ಜಿಲ್ಲೆಯ ಹಲವೆಡೆ ಜೋರು ಮಳೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ. ಕೆರೆ ಕಟ್ಟೆ ಕೋಡಿ ಬಿದ್ದು ರಸ್ತೆ, ಮನೆ, ಜಮೀನುಗಳಿಗೆ ನುಗ್ಗಿದ ನೀರು. ಕಳೆದೆರಡು ದಿನಗಳ ಮಳೆಯ ಅಬ್ಬರಕ್ಕೆ ಜನ ಹೈರಾಣು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.